ಇಲ್ಲಿಂದ ಅಲ್ಲಿಗೆ, ಅಲ್ಲಿಂದ ಮತ್ತಿಲ್ಲಿಗೆ
ತಿರುಗಿ ನೋಡಿ ದಾಖಲು ಮಾಡಿಕೊಳ್ಳಲೂ
ಪುರುಸೊತ್ತಿರದಷ್ಟು ಕೆಲಸದ ನಡುವೆ, ಕಂಡ
ನೂರೆಂಟು ನೋಟಗಳು,
ಅವುಗಳಾಚೆಗೆ ಹೊಳೆವ ಹಲವಾರು ಚಿತ್ರಗಳು
ಎಲ್ಲ ಮೆಮೊರಿ ಕಾರ್ಡಿನಲ್ಲಿವೆ,
ಈ ವಾರ ಕಾದಿರುವ ಕೆಲಸದೊತ್ತಡದ ನಡುವೆ
ಒಂದೊಂದಾಗಿ ಪಡಿಮೂಡಲು ಕಾಯುತ್ತಾ..
ಹೋಗಿದ್ದೆಲ್ಲಿಗೆ ಬಂದಿದ್ದೆಲ್ಲಿಗೆ?
ಅದೇ ದಿಲ್ಲಿಗೆ.. ಮತ್ತೆ ಬೆಂಗಳೂರಿಗೆ..
ಪುಣ್ಯವೆಂದರೆ ಹೊರಟ ಜಾಗಕ್ಕೆ
ಮತ್ತೆ ಬಂದು ಸೇರಿರುವುದು.
ಅದೇ ಜಾಗ, ಅದೇ ಮನೆ,
ಹೊರಟಾಗ
ಮೊಗ್ಗು ಮೂಡಿದ್ದ ಗಿಡದ ತುಂಬ
ಈಗ
ಬಿರಿದು ನಿಂತ ಹೂಚೆಲುವು..
ನಾಲ್ಕಾರು ತಿಳಿವಿನ ಹೊಳವು
ಸುತ್ತ ಹರಡಿ..
ಮಳೆನಿಂತ ಬೆಳಗು.
ಮೃಗಶಿರ : ಹಲವು ಕಥೆಗಳ ಒಂದು ಸುಂದರ ಗುಚ್ಛ
-
*ಯಾ*ವುದೇ ಪುಸ್ತಕವನ್ನು ಅದರ ಮುಖಪುಟವನ್ನು ನೋಡಿ ಅಳೆಯದಿರು ಎಂದು ಹೇಳುತ್ತಾರೆ. ಅಂತೆಯೇ
ಓರ್ವ ವ್ಯಕ್ತಿಯ ಬದುಕನ್ನು ಅರಿಯುವಾಗ, ಕೇವಲ ಆತನ ಏಕಪಕ್ಷೀಯ ಮಾತುಗಳನ್ನು, ಅವರಿವರು
ಹೇಳಿದ್ದ...