ಕವಿಕಾಣ್ಕೆಯ ಸ್ನೇಹಿತನಿಗೆ...
ಕಾಲುಹಾದಿಯ ಪಯಣದಲ್ಲಿ
ನೆರಳು ಬಿಸಿಲ ಚಿನ್ನಾಟ;
ಎಲ್ಲೋ ನಿಂತು
ನಿಡಿದಾದ ಉಸಿರೆಳೆಯುವಾಗ
ನಿನ್ನ ನೆನಪಿನ
ಹೂವರಳಿದ ಗಂಧ
ಬಗ್ಗಿ ನೋಡಿ ಗಿಡವ ಹುಡುಕಲಾರೆ
ನಿಬಿಡ ಕಾಡು, ಪೊದೆ;
ದೂರವೆನಿಸುತ್ತಿದೆ ಆದರೂ
ಹತ್ತಿರವಾಗಿ ಸುಳಿಯುತ್ತಿದೆ ಗಂಧ
ಹೂವರಳಿದ ನೆನಕೆಗೇ
ಮೈಯೆಲ್ಲ ಮುಳ್ಳು..
ಮತ್ತೆ ಮುಂದೋಡುವ ಪಯಣ,
ಎಚ್ಚರ ಕನಸುಗಳ ನಡುವಣ
ದಿನದಿನದ ಗಾಣ
ಗೊತ್ತು ಇನ್ಯಾವುದೋ
ತಿರುನಲ್ಲಿ
ಬರಲಿದೆ
ನೆನಪಿನ ಬನದ ನಿನ್ನ ಗಂಧ ಗಾಳಿ!
ದೂರವ ಮೀರಿ,
ಮರೆವನು ಮೆಟ್ಟಿ,
ಹಾಯೆನಿಸುವಂತೆ
ತೀಡಿ ಬರುವ
ನಿನ್ನ ದೃಶ್ಯಕಾವ್ಯಕ್ಕೆ
ಮಧುರ ಸ್ನೇಹಕ್ಕೆ
ಆಭಾರಿ ಸಮುದ್ರೆಯ
ಕಣ್ಣ ಹನಿಗಳ ಕಾಣಿಕೆ
ನೆನಪಿನಲೆಗಳ ಮಾಲಿಕೆ..
Thursday, July 16, 2009
Tuesday, July 14, 2009
ಅರ್ಥ - ಅಪಾರ್ಥ
" If you have built castles in the air, your work need not be lost;
that is where they should be.
Now put the foundations under them.."
ಹೆನ್ರಿ ಡೇವಿಡ್ ಥೋರೋ (ಥೋರು) ನ ಈ ಉಕ್ತಿ ನನ್ನನ್ನು ಸದಾ ಕಾಡಿದ, ಕಾಪಾಡಿದ ಸಾಲು.
ಕಾಡುವ ಸಾಲುಗಳನ್ನ ಬರೆದವರ ಬಗೆಗಿನ ಅರ್ಥ-ಅಪಾರ್ಥಗಳ ಕುರಿತು ನನ್ನ ಇತ್ತೀಚಿನ ಗ್ರಹಿಕೆಯನ್ನ ಕೆಂಡಸಂಪಿಗೆಯ ನನ್ನ ಅಂಕಣ ಲಾವಂಚದಲ್ಲಿ ಪ್ರಕಟಿಸಲಾಗಿದೆ. [http://kendasampige.com/article.php?id=2657]
ಸಮಯವಿದ್ದರೆ ಓದಿ, ಏನನ್ನಿಸಿತು ಹಂಚಿಕೊಳ್ಳಿ.
ಪ್ರೀತಿಯಿಂದ
ಸಿಂಧು
Thursday, July 2, 2009
ಕರುಣಾಳು ಬಾ ಬೆಳಕೆ..
ಸಂಜೆ ಕಾವಳ ಕವಿದಿದೆ
ದೂರದಿ ತೇಲಿಹ ಕರ್ಮುಗಿಲ ಮಾಲೆ
ಭುವಿಯ ಮೈಗೆ ಮೆತ್ತಿದೆ
ಇನ್ನೇನು ಮಳೆ ಬರಲಿದೆ..
ದಿನದ ಬಿನ್ನಹಗಳ
ಆಲಿಪನೆಂದು ನಂಬಿದವನ ಮುಂದೆ
ಎರಡು ನಂದಾದೀಪ
ಬತ್ತಿ ಸರಿಮಾಡಿ ಎಣ್ಣೆತುಂಬಿಸಿ
ಕಡ್ಡಿ ಕೊರೆದರು ಗೌರಮ್ಮ
ದೇವರ ಮುಂದೆ ಚೆಂಬೆಳಕು
ಹಚ್ಚಿದ ಮೊಗದ ಮೇಲೂ
ಪ್ರತಿಫಲಿಸಿ ಚೆಲ್ಲಿದ ಬೆಳಕು,
ಕಾವಳ ಸರಿಯಿತೆ ಹೊರಗೆ?!
ಸಮಾನತೆಯ ಬೇರಿನ
ಕಷಾಯ ಕುಡಿದವಳಿಗೆ
ಇರಿಸುಮುರಿಸು
ಅವರು ಹಚ್ಚಬಹುದೆ ದೀಪ
ಅತ್ತೆ ಸ್ವತಃ ಹುಣಿಸೆಹಣ್ಣು
ತಿಕ್ಕಿ ತೊಳೆದು ಇಟ್ಟ ದೀಪ !
ಸಂಜೆ ಕಾವಳ ಇಳಿದಿತ್ತು
ಮನಸಿನ ಒಳಗೆ;
ದೀಪದ ನಿಹಾರಿಕೆ ಹೊರಗೆ;
ದೇವರೆಡೆಗೆ.
ವಿಚಾರವೇನಿದ್ದರೂ ಮಾತಿಗೆ,
ಬರವಣಿಗೆಗೆ,
ಕೊನೆಗೂ ದೀಪದ ಸುತ್ತ ಕತ್ತಲೆ,
ಬೆಳಕು ಮಾತ್ರ ಬೆಳ್ಳಗೆ,
ಕಪ್ಪಿಡದೆ.. ತನ್ನ ಪಾಡಿಗೆ ತಾನಿದೆ..
ನಕ್ಕಳೊಬ್ಬ ಕಿನ್ನರಿ
ಹರಿಯಿತೊಂದು ಬೆಳಕ ಝರಿ
ಮನೆದೇವರನ್ನೆ
ಮಡಿಲಿಗೆ ತುಂಬಿಹೆನು
ದೀಪ ಹಚ್ಚಬಾರದೆ
ದೇವರಿಗೂ ಮೈಲಿಗೆಯೇ?!
ಹಬ್ಬಿದ ಕಾವಳ ಕರಗಿ
ಮೋಡಒಡೆದು ಮಳೆಯಾಗಿ
ಗೌರಮ್ಮನಲಿ
ಅಮ್ಮನದೇ ಬಿಂಬ
ಮನದ ಕಪ್ಪು ತೊಳೆದ ಬೆಳಕು
ಮತ್ತೆ ಮತ್ತೆ ಮಿನುಗಿ
ನಿತ್ರಾಣದಿ ಮೂಲೆಹಿಡಿದ
ವಿಚಾರದೆಳೆಯಲಿ
ಹೊಸ ಜೀವಸೆಲೆ.
ದೂರದಿ ತೇಲಿಹ ಕರ್ಮುಗಿಲ ಮಾಲೆ
ಭುವಿಯ ಮೈಗೆ ಮೆತ್ತಿದೆ
ಇನ್ನೇನು ಮಳೆ ಬರಲಿದೆ..
ದಿನದ ಬಿನ್ನಹಗಳ
ಆಲಿಪನೆಂದು ನಂಬಿದವನ ಮುಂದೆ
ಎರಡು ನಂದಾದೀಪ
ಬತ್ತಿ ಸರಿಮಾಡಿ ಎಣ್ಣೆತುಂಬಿಸಿ
ಕಡ್ಡಿ ಕೊರೆದರು ಗೌರಮ್ಮ
ದೇವರ ಮುಂದೆ ಚೆಂಬೆಳಕು
ಹಚ್ಚಿದ ಮೊಗದ ಮೇಲೂ
ಪ್ರತಿಫಲಿಸಿ ಚೆಲ್ಲಿದ ಬೆಳಕು,
ಕಾವಳ ಸರಿಯಿತೆ ಹೊರಗೆ?!
ಸಮಾನತೆಯ ಬೇರಿನ
ಕಷಾಯ ಕುಡಿದವಳಿಗೆ
ಇರಿಸುಮುರಿಸು
ಅವರು ಹಚ್ಚಬಹುದೆ ದೀಪ
ಅತ್ತೆ ಸ್ವತಃ ಹುಣಿಸೆಹಣ್ಣು
ತಿಕ್ಕಿ ತೊಳೆದು ಇಟ್ಟ ದೀಪ !
ಸಂಜೆ ಕಾವಳ ಇಳಿದಿತ್ತು
ಮನಸಿನ ಒಳಗೆ;
ದೀಪದ ನಿಹಾರಿಕೆ ಹೊರಗೆ;
ದೇವರೆಡೆಗೆ.
ವಿಚಾರವೇನಿದ್ದರೂ ಮಾತಿಗೆ,
ಬರವಣಿಗೆಗೆ,
ಕೊನೆಗೂ ದೀಪದ ಸುತ್ತ ಕತ್ತಲೆ,
ಬೆಳಕು ಮಾತ್ರ ಬೆಳ್ಳಗೆ,
ಕಪ್ಪಿಡದೆ.. ತನ್ನ ಪಾಡಿಗೆ ತಾನಿದೆ..
ನಕ್ಕಳೊಬ್ಬ ಕಿನ್ನರಿ
ಹರಿಯಿತೊಂದು ಬೆಳಕ ಝರಿ
ಮನೆದೇವರನ್ನೆ
ಮಡಿಲಿಗೆ ತುಂಬಿಹೆನು
ದೀಪ ಹಚ್ಚಬಾರದೆ
ದೇವರಿಗೂ ಮೈಲಿಗೆಯೇ?!
ಹಬ್ಬಿದ ಕಾವಳ ಕರಗಿ
ಮೋಡಒಡೆದು ಮಳೆಯಾಗಿ
ಗೌರಮ್ಮನಲಿ
ಅಮ್ಮನದೇ ಬಿಂಬ
ಮನದ ಕಪ್ಪು ತೊಳೆದ ಬೆಳಕು
ಮತ್ತೆ ಮತ್ತೆ ಮಿನುಗಿ
ನಿತ್ರಾಣದಿ ಮೂಲೆಹಿಡಿದ
ವಿಚಾರದೆಳೆಯಲಿ
ಹೊಸ ಜೀವಸೆಲೆ.
Subscribe to:
Posts (Atom)