ಸಮಾನತೆ, ಸ್ವಾತಂತ್ರ್ಯ
ಸ್ವಾವಲಂಬನೆ
ಒಳ್ಳೆಯ ಉಕ್ತಲೇಖನದ ಪದಗಳು.
ಎಷ್ಟೇ ಸರಿಯಾಗಿ ಬರೆದರೂ
ಅವು ಪುಸ್ತಕದ ಮೇಲೆ ಮಾತ್ರ.
ಮಾತುಗಳಲ್ಲಿ ಬಂದರೂ
ಭಾಷಣಗಳಲ್ಲಿ ಮಾತ್ರ.
ಪದಗಳಲ್ಲಿ ಮೂಡಿದರೂ
ಪ್ರಶಸ್ತಿ ಪಡೆಯುವ ಕವಿತೆಗಳಿಗೆ ಮಾತ್ರ.
ಚಿತ್ರದಲ್ಲಿ ಬರಬೇಕಿದ್ದರೆ
ಕಲಾತ್ಮಕ ಸಿನಿಮಾಗಳಿಗೆ ಮಾತ್ರ.
ಬದುಕಿನ ಸ್ತರವೇ ಬೇರೆ
ಹೆಣ್ಣು ಯಾವತ್ತಿದ್ದರೂ ಹೊಂದಾಣಿಕೆಗೆ ಮಾತ್ರ.
ಅವ್ವರಸಿಯ ಸಾರ್ಥಕ ಬದುಕಿನ ಅನಾವರಣ
-
ಬಾಲ್ಯದಲ್ಲಿ ಶಾಲಾದಿನಗಳಲ್ಲಿ ನಡೆಯುತ್ತಿದ್ದ ಛದ್ಮವೇಷ ಸ್ಪರ್ಧೆಯಲ್ಲಿ ಹಲವು ಹೆಣ್ಮಕ್ಕಳು
ಹಾಕುತ್ತಿದ್ದುದು ಕಿತ್ತೂರು ರಾಣಿ ಚೆನ್ನಮ್ಮ, ಉಳ್ಳಾಲದ ಅಬ್ಬಕ್ಕ ರಾಣಿ, ಒನಕೆ ಓಬವ್ವ, ಝಾನ...