ಸುತ್ತ ನಾಕು ಚುಕ್ಕಿ,
ನೆಟ್ಟಗೆಳೆದರೆ ನಕ್ಷತ್ರ,
ಸೊಟ್ಟಗೆಳೆದರೆ ಬಳ್ಳಿರಂಗೋಲೆ,
ನನ್ನದೇ ಚುಕ್ಕಿ, ನನ್ನದೇ ಗೆರೆ. ಇಷ್ಟೆ.
ಮಂಡಲವ ಮೀರಿ
ಪಥ ಹುಡುಕುವ ಮನ
ಮತ್ತೆ ಮತ್ತೆ
ನಾನೇ ಇಟ್ಟ ಚುಕ್ಕಿ
ಎಳೆದ ಗೆರೆಯೊಳಗೆ
ಸುತ್ತಿ ಸುತ್ತಿ
ಕಣ್ಣ ಕೊನೆಯಲ್ಲಿ ಹನಿಯಾಗಿ
ತುಂಬುತ್ತದೆ. ಅಷ್ಟೆ.
ಗೊತ್ತಿಲ್ಲ
ಇಷ್ಟಕ್ಕೂ ನನಗ್ಯಾಕೆ
ರಂಗೋಲಿಯ ಉಸಾಬರಿ
ಅದು ಹೇಗೋ ಏನೋ
ಇದೇ ಬದುಕಿನ ಪರಿ,
ಅರಿವಿರದೆ
ಇಟ್ಟ ಚಿಕ್ಕೆ
ಎಳೆದ ಗೆರೆ
ನನ್ನದೇ ಮಂಡಲದಲ್ಲಿ
ನಾನೇ ಸೆರೆ. ಪಥಭ್ರಷ್ಟೆ.
ಭಾರತದೇಶದಲ್ಲಿದ್ದ ವಿವಿಧ ಸಮುದಾಯಗಳು ಹಾಗು ಭಾರತೀಯ ಸಂಸ್ಕೃತಿ
-
“ಅಸ್ಯುತ್ತರಸ್ಯಾಂ ದಿಶಿ ದೇವತಾತ್ಮಾ ಹಿಮಾಲಯೋ ನಾಮ ನಗಾಧಿರಾಜಃ| ಪೂರ್ವಾಪರೌ ತೋಯನಿಧೀ
ವಗಾಹ್ಯ ಸ್ಥಿತಃ ಪೃಥಿವ್ಯಾ ಇವ ಮಾನದಂಡಃ ”
ಕವಿಗುರು ಕಾಳಿದಾಸನು ತನ್ನ ‘ಕುಮಾರಸಂಭವ’ ಕಾವ್ಯ...