ಕಡುನೀಲಿ ಆಕಾಶದ ದೂರದಂಚಲ್ಲಿ
ಮಿಂಚಿ ಬೆಳಕಾಗುತ್ತಿದೆ ಒಂದು ಪುಟ್ಟ ಕಿರಣ
ಕಾಯಿ ಇನ್ನೊಂದೆರಡು ಗಳಿಗೆ,
ಕೆಂಪು ಕೆಂಪು ಸೂರ್ಯ
ಬೆಚ್ಚಗೆ ಬೆಳಕಿನೋಕುಳಿಯಲ್ಲಿ!
ಬೂದಿಬೂದಿ ಮೋಡದ ಒಡಲು
ತುಂಬಿ ನಿಂತಿದೆ, ಸೆಖೆಯಲ್ಲೊಂದು ತಂಪುಗಾಳಿ
ಗಳಿಗೆಯೆರಡು ಕಳೆಯಲಿ
ತಂಪು ತಂಪು ಹನಿ, ಉಲ್ಲಸದ ಮಣಿ!
ಹಸಿರೆಲೆಗಳ ನಡುವೆ ಮೂಡಿದ ಮೊಗ್ಗು
ಒಂದೊಪ್ಪತ್ತು ಕಾಯ್ದರಾಯಿತು
ನಸುಬಿರಿದು ಸುತ್ತ ಘಮ ಮೆಲ್ಲಗೆ ಹರಡಿ
ಆಹಾ ಕಾಯುವುದರಲ್ಲೆಷ್ಟು ಸುಖವಿದೆ!
ಸಧ್ಯ ಬರೀ ಕತ್ತಲೆ ಅಂದುಕೊಂಡು
ಮತ್ತೆ ಹೊದ್ದು ಮಲಗಲಿಲ್ಲ
ಕೆಂಪುಮಣಿಯ ಉದಯರಾಗ ಮನತುಂಬಿದೆ;
ಓಹೋ ಸೆಖೆ ಎಂದು ಹಾದಿ ಬಿಟ್ಟು ಸರಿಯಲಿಲ್ಲ
ತಂಪು ಸುರಿದಿದೆ;
ಅರಳಲಿಲ್ಲವೆಂದು ಗಿಡವ ಸಲಹದೆ ಹೋಗಲಿಲ್ಲ
ಇಂದು ಮೊಗ್ಗು ಬಿರಿದಿದೆ;
ಆಹಾ ಕಾಯುವುದರಲ್ಲೂ ಸುಖವಿದೆ.
ಮೃಗಶಿರ : ಹಲವು ಕಥೆಗಳ ಒಂದು ಸುಂದರ ಗುಚ್ಛ
-
*ಯಾ*ವುದೇ ಪುಸ್ತಕವನ್ನು ಅದರ ಮುಖಪುಟವನ್ನು ನೋಡಿ ಅಳೆಯದಿರು ಎಂದು ಹೇಳುತ್ತಾರೆ. ಅಂತೆಯೇ
ಓರ್ವ ವ್ಯಕ್ತಿಯ ಬದುಕನ್ನು ಅರಿಯುವಾಗ, ಕೇವಲ ಆತನ ಏಕಪಕ್ಷೀಯ ಮಾತುಗಳನ್ನು, ಅವರಿವರು
ಹೇಳಿದ್ದ...