ಭಾದ್ರಪದ ಮುಗಿಯುವ ಸಮಯ
ಚವತಿ ಚಂದಿರನ ಅಪವಾದ ಅಂಟಿಸುವ
ಚೆಲ್ಮೊಗಕ್ಕೆ
ಕೃಷ್ಣಪಕ್ಷದ ಸವೆತ..
ಅಲ್ಲಿ ಪಡುವಣದ ತೀರದಲ್ಲಿ
ಒಬ್ಬರಿನ್ನೊಬ್ಬರಲ್ಲಿ ಲೀನದಂಪತಿಗಳ ಮಡಿಲಲ್ಲಿ
ಮೊಗ್ಗು ಹೂಬಿರಿದಿದೆ;
ಮನಸು ಹಗುರಾಗಿ,
ಚಳಿ ಕೂರುತ್ತಿರುವ ಸಂಜೆಗಳಲ್ಲಿ
ಮಳೆಮೋಡದ ನೆನಪು ದಟ್ಟವಾಗಿ-
ಪುಟ್ಟವಳು, ಚಿಕ್ಕವಳು
ಇವತ್ತಷ್ಟೇ ಹುಟ್ಟಿದವಳು
ಅಮ್ಮನ ಮಡಿಲು ತುಂಬಿ,
ಅಪ್ಪನ ಮನಸು ತುಂಬಿ,
ಸುತ್ತೆಲ್ಲರ ಬದುಕಲ್ಲಿ ಆಹ್ಲಾದ ತುಂಬುವವಳು
ಚೆಲುವಾಗಿ,ಒಳಿತಾಗಿ ಬೆಳೆಯಲಿ
ಎಂದು
ನವನವೋನ್ಮೇಷ ಶಾಲಿನೀ
ಪ್ರಕೃತಿಯ ಚರಣಗಳಲ್ಲಿ
ಒಂದು ತುಪ್ಪದ ದೀಪದ ವಿನಂತಿ..
ಇಲ್ಲಿ ಬೆಳಗುವ ಸೊಡರಿನ
ಪ್ರತಿಫಲನಕ್ಕೆ
ಇಂದು ಸಂಜೆಯ ಪಡುವಣ ತೀರದ ಕೆನ್ನೆ ಇನ್ನಷ್ಟು ಕೆಂಪಾಗಲಿದೆ.
ನೋಟ್ ಬುಕ್ಕಿನ ಕಡೆಯ ಪುಟ.....ಜಯಶ್ರೀ ದೇಶಪಾಂಡೆ
-
ʼನೋಟ್ ಬುಕ್ಕಿನ ಕಡೆಯ ಪುಟʼ ಈ ಹಾಸ್ಯಪಂಚವಿಂಶತಿಯನ್ನು ಬರೆದ ಶ್ರೀಮತಿ ಜಯಶ್ರೀ
ದೇಶಪಾಂಡೆಯವರಿಗೆ ಹಾಗು ಪ್ರಕಟಿಸಿದ ಶ್ರೀ ಅಣಕು ರಾಮನಾಥರಿಗೆ ಅಭಿನಂದನೆಗಳನ್ನು ಹಾಗು
ಧನ್ಯವಾದಗಳನ್ನು ಮ...