ಕಣ್ಣಿಗೆ ಕಂಡದ್ದೆಲ್ಲವನ್ನೂ
ಮನದ ಭಿತ್ತಿಯೊಳಗೆ ಮೂಡಿಸಲಾಗುವುದಿಲ್ಲ;
ಒಳಗೆ ಮೂಡಿದ್ದೆಲ್ಲವನ್ನೂ
ಹೊರಗೆ ಹಂಚಿಕೊಳ್ಳಲೂ ಆಗುವುದಿಲ್ಲ.
ಕಂಬನಿಯ ಬದುಕಿಗೆ
ಕವಿತೆಯ ಕರವಸ್ತ್ರ ಕೊಟ್ಟವರು
ಮಾತಿನ ಹಾದಿಯುದ್ದಕ್ಕೆ
ಮೌನದ ಹೆಜ್ಜೆ ಇಟ್ಟು ಹೋಗಿದ್ದಾರೆ.
ಇಷ್ಟಕ್ಕೂ ಭಾವವೊಂದು
ನನ್ನದೇ ಮಾತಾಗಿ ದಾಖಲಾಗಲೇಬೇಕೆ!
ಗುಳ್ಳೆ-
ಒಳಿತು,ಚೆಲುವು,ಭಾವ,ಸಹಯಾನ,ಬದುಕು,ಬದಲಾವಣೆ,ನಾನುಇತ್ಯಾದಿ..
- ಎಲ್ಲ ಗುಳ್ಳೆಗಳೂಒಡೆದಿವೆ,
ಈ ದಾರಿ ಕೊನೆಗೊಂಡಿದೆ.
ಎಲ್ಲರ ಪ್ರೀತಿಯ ಸ್ಪಂದನೆಗೆ ತಲೆಬಾಗಿ ನಮಿಸುತ್ತಾ
ನೇಪಥ್ಯ ಸಿಂಧುವಿನೊಳಗಿನ್ನೊಂದು ಬಿಂದುವಾಗಿ..
-ಪ್ರೀತಿಯಿಂದ
ಸಿಂಧು
ಜೋತಯ್ಯನ ಬಿದಿರು ಬುಟ್ಟಿ..................................ತೇಜಸ್ವಿನಿ ಹೆಗಡೆ
-
ಮಾನವೀಯ ಅನುಕಂಪವು ತೇಜಸ್ವಿನಿ ಹೆಗಡೆಯವರ ಸಾಹಿತ್ಯದ ಮೂಲಸ್ರೋತವಾಗಿದೆ. ತೇಜಸ್ವಿನಿಯವರ
ಕಥೆಗಳು ಸಂವೇದನಾಶೀಲ ಲೇಖನಿಯಿಂದ ಬಂದ ಕಥೆಗಳಾಗಿವೆ. ‘ಜೋತಯ್ಯನ ಬಿದಿರು ಬುಟ್ಟಿ’ಯೊಳಗಿರುವ
ಹತ್ತ...