ಕಣ್ಣಿಗೆ ಕಂಡದ್ದೆಲ್ಲವನ್ನೂ
ಮನದ ಭಿತ್ತಿಯೊಳಗೆ ಮೂಡಿಸಲಾಗುವುದಿಲ್ಲ;
ಒಳಗೆ ಮೂಡಿದ್ದೆಲ್ಲವನ್ನೂ
ಹೊರಗೆ ಹಂಚಿಕೊಳ್ಳಲೂ ಆಗುವುದಿಲ್ಲ.
ಕಂಬನಿಯ ಬದುಕಿಗೆ
ಕವಿತೆಯ ಕರವಸ್ತ್ರ ಕೊಟ್ಟವರು
ಮಾತಿನ ಹಾದಿಯುದ್ದಕ್ಕೆ
ಮೌನದ ಹೆಜ್ಜೆ ಇಟ್ಟು ಹೋಗಿದ್ದಾರೆ.
ಇಷ್ಟಕ್ಕೂ ಭಾವವೊಂದು
ನನ್ನದೇ ಮಾತಾಗಿ ದಾಖಲಾಗಲೇಬೇಕೆ!
ಗುಳ್ಳೆ-
ಒಳಿತು,ಚೆಲುವು,ಭಾವ,ಸಹಯಾನ,ಬದುಕು,ಬದಲಾವಣೆ,ನಾನುಇತ್ಯಾದಿ..
- ಎಲ್ಲ ಗುಳ್ಳೆಗಳೂಒಡೆದಿವೆ,
ಈ ದಾರಿ ಕೊನೆಗೊಂಡಿದೆ.
ಎಲ್ಲರ ಪ್ರೀತಿಯ ಸ್ಪಂದನೆಗೆ ತಲೆಬಾಗಿ ನಮಿಸುತ್ತಾ
ನೇಪಥ್ಯ ಸಿಂಧುವಿನೊಳಗಿನ್ನೊಂದು ಬಿಂದುವಾಗಿ..
-ಪ್ರೀತಿಯಿಂದ
ಸಿಂಧು
ಮೃಗಶಿರ : ಹಲವು ಕಥೆಗಳ ಒಂದು ಸುಂದರ ಗುಚ್ಛ
-
*ಯಾ*ವುದೇ ಪುಸ್ತಕವನ್ನು ಅದರ ಮುಖಪುಟವನ್ನು ನೋಡಿ ಅಳೆಯದಿರು ಎಂದು ಹೇಳುತ್ತಾರೆ. ಅಂತೆಯೇ
ಓರ್ವ ವ್ಯಕ್ತಿಯ ಬದುಕನ್ನು ಅರಿಯುವಾಗ, ಕೇವಲ ಆತನ ಏಕಪಕ್ಷೀಯ ಮಾತುಗಳನ್ನು, ಅವರಿವರು
ಹೇಳಿದ್ದ...