ಈಗಷ್ಟೆ ನಿಂತ ಮಳೆ,
ಮರಮರದ ಹಸಿರೆಲೆಯ
ತುದಿಮೂಗಲ್ಲಿ ಪುಟ್ಟ ಪುಟ್ಟಹನಿ,
ಮೋಡ ಚೆದುರಿ, ಕೊನೆಯ ಕಿರಣಗಳು
ಕೆಂಪಗೆ ನೀಲಿಯಲ್ಲಿ ಹರಡುತ್ತಾ
ಹಿತವಾದ ಸಂಜೆ,
ದಾರಿ ಇಕ್ಕೆಲದ ಕಳೆಗಿಡಕ್ಕೂ
ಮಳೆಹನಿಯ ಸವಿದು
ಎಂತದೋ ಬಳುಕು ;
ದಾರಿಬದಿಯ ನೀರಹರಿವಿನಲ್ಲಿ
ಚಿಣ್ಣರ ಪುಟ್ಟ ಕಾಲಾಟ;
ತುಂಬಿಬಂದಿದೆ ಮನ
ಮನೆಗೆ ಬಂದವಳು ಕದವ ತೆರೆದೆ
ಬಾಲ್ಕನಿಯಾಚೆಗೆ ದೂರದಲಿ
ಸಾವನದುರ್ಗದ ಮೇರುನೋಟ;
ನೀನಿಲ್ಲ ಜತೆಯಲ್ಲಿ
ಅಕ್ಷಾಂಶವೇ ಬೇರೆ
ಹರಡಿಬಿದ್ದಿದೆ ಗುರುತು ಹಾಕಿಟ್ಟ ಭೂಪಟ
ಗೊತ್ತು ಕೆಲದಿನಗಳ ದೂರ
ಹೇಗೆ ಇಳುಕಲಿ ಮನದ ಭಾರ?
ಕೈ ಮುಗಿದು ಕೂತಿದ್ದೇನೆ
ಬಿಸಿಹಾಲಿನ ಬಟ್ಟಲ ಮುಂದೆ..
ಗೊತ್ತು ನೀನಲ್ಲೆ ಇದ್ದರೂ
ಮನಸು ಇಲ್ಲೆ ಉಳಿದಿದೆ..!
ಮೃಗಶಿರ : ಹಲವು ಕಥೆಗಳ ಒಂದು ಸುಂದರ ಗುಚ್ಛ
-
*ಯಾ*ವುದೇ ಪುಸ್ತಕವನ್ನು ಅದರ ಮುಖಪುಟವನ್ನು ನೋಡಿ ಅಳೆಯದಿರು ಎಂದು ಹೇಳುತ್ತಾರೆ. ಅಂತೆಯೇ
ಓರ್ವ ವ್ಯಕ್ತಿಯ ಬದುಕನ್ನು ಅರಿಯುವಾಗ, ಕೇವಲ ಆತನ ಏಕಪಕ್ಷೀಯ ಮಾತುಗಳನ್ನು, ಅವರಿವರು
ಹೇಳಿದ್ದ...