ಸಮಾನತೆ, ಸ್ವಾತಂತ್ರ್ಯ
ಸ್ವಾವಲಂಬನೆ
ಒಳ್ಳೆಯ ಉಕ್ತಲೇಖನದ ಪದಗಳು.
ಎಷ್ಟೇ ಸರಿಯಾಗಿ ಬರೆದರೂ
ಅವು ಪುಸ್ತಕದ ಮೇಲೆ ಮಾತ್ರ.
ಮಾತುಗಳಲ್ಲಿ ಬಂದರೂ
ಭಾಷಣಗಳಲ್ಲಿ ಮಾತ್ರ.
ಪದಗಳಲ್ಲಿ ಮೂಡಿದರೂ
ಪ್ರಶಸ್ತಿ ಪಡೆಯುವ ಕವಿತೆಗಳಿಗೆ ಮಾತ್ರ.
ಚಿತ್ರದಲ್ಲಿ ಬರಬೇಕಿದ್ದರೆ
ಕಲಾತ್ಮಕ ಸಿನಿಮಾಗಳಿಗೆ ಮಾತ್ರ.
ಬದುಕಿನ ಸ್ತರವೇ ಬೇರೆ
ಹೆಣ್ಣು ಯಾವತ್ತಿದ್ದರೂ ಹೊಂದಾಣಿಕೆಗೆ ಮಾತ್ರ.
ನೋಟ್ ಬುಕ್ಕಿನ ಕಡೆಯ ಪುಟ.....ಜಯಶ್ರೀ ದೇಶಪಾಂಡೆ
-
ʼನೋಟ್ ಬುಕ್ಕಿನ ಕಡೆಯ ಪುಟʼ ಈ ಹಾಸ್ಯಪಂಚವಿಂಶತಿಯನ್ನು ಬರೆದ ಶ್ರೀಮತಿ ಜಯಶ್ರೀ
ದೇಶಪಾಂಡೆಯವರಿಗೆ ಹಾಗು ಪ್ರಕಟಿಸಿದ ಶ್ರೀ ಅಣಕು ರಾಮನಾಥರಿಗೆ ಅಭಿನಂದನೆಗಳನ್ನು ಹಾಗು
ಧನ್ಯವಾದಗಳನ್ನು ಮ...