ಎಲ್ಲ ಕತ್ತಲ ಕೊನೆಯಲ್ಲೊಂದು ಬೆಳಕಿನ ಕೋಲು, ಬೇಸರದ ಕ್ಷಣಗಳ ಭಾರದ ಮೋಡವ ಇಳುಹಲು ಸುರಿವ ಮಳೆಯ ಆಹ್ಲಾದ,
ಇದೆ ಅಲ್ಲವೆ ಬದುಕು ಎಂಬ ಅರಿವು ಮತ್ತು ಇದೆಯೆ ಬದುಕು ಎಂಬ ಅಚ್ಚರಿ.
ನಾನು ತುಂಬ ಇಷ್ಟಪಟ್ಟ ಅಶ್ವತ್ಥರು ಮತ್ತು ಇಷ್ಟವಾಗಿದ್ದ ವಿಷ್ಣು ಇಬ್ಬರ ನಿರ್ಗಮನದ ಸುದ್ದಿಯ ಕಾರ್ಮೋಡದಂಚಿನ ಬೆಳ್ಳಿಗೆರೆಯಂತೆ ಹೊಳೆಯುತ್ತಿರುವುದು ಇನ್ನೊಂದು ಸುದ್ದಿ - ಸಂಕ್ರಾಂತಿಯ ಕಂಪಿಗೆ ಮತ್ತೆ ಕೆಂಡಸಂಪಿಗೆ
http://kendasampige.com/article.php?id=2953
ನೋವುಗಳನ್ನ ಮೀರುವ ಶಕ್ತಿಯನ್ನ ಬಯಸುತ್ತಾ,
ಪ್ರೀತಿಯಿಂದ,
ಸಿಂಧು
ಮೃಗಶಿರ : ಹಲವು ಕಥೆಗಳ ಒಂದು ಸುಂದರ ಗುಚ್ಛ
-
*ಯಾ*ವುದೇ ಪುಸ್ತಕವನ್ನು ಅದರ ಮುಖಪುಟವನ್ನು ನೋಡಿ ಅಳೆಯದಿರು ಎಂದು ಹೇಳುತ್ತಾರೆ. ಅಂತೆಯೇ
ಓರ್ವ ವ್ಯಕ್ತಿಯ ಬದುಕನ್ನು ಅರಿಯುವಾಗ, ಕೇವಲ ಆತನ ಏಕಪಕ್ಷೀಯ ಮಾತುಗಳನ್ನು, ಅವರಿವರು
ಹೇಳಿದ್ದ...