ಕವಡೆ ಬೀಸಿದಾಗಲೆಲ್ಲ
ಬಿದ್ದಿದ್ದು ವಚ್ಚಿ,
ಒಂದೊಂದೇ ಹೆಜ್ಜೆ ಇಟ್ಟು
ಮುನ್ನಡೆದ ಬದುಕ
ಹಾದಿಯ ತುಂಬ
ಬಿಸಿಲು ನೆರಳಾಟ;
ಯಾರದೋ ಕಣ್ ಸೆಳೆದು,
ಕವಡೆ ಜೋತಿಷ ನುಡಿಯೆ,
ಬರುವ ದಕ್ಷಿಣೆಗೆ
ಸರಿಹೋದೀತು
ಸೆಟ್ಟರಂಗಡಿಯ ಲೆಕ್ಕ.
ದಿನಕೊಂದು ಹೊತ್ತು ಉಂಡರೆ
ಅದೇ ಸುಖ;
ಕವಡೆಯ ಬೀಸಿ
ತಮ್ಮ ನಾಳೆಯ ತಾವೆ ತಿಳಿವವರು
ಕೂರುವರು ಇಲ್ಯಾಕ?!
ನಮ್ಮ ನಾಳೆ ನಿನ್ನೆಗಳೆಲ್ಲ ಒಂದೇ -
ಇಂದೇ!
ತಿಳಿಯುವ ತಿಣುಕಾಟವಿಲ್ಲ
ಬರಿದೆ
ಬದುಕಬೇಕಿದೆ!
ಜೋತಿಷ ಕೇಳಿದ ಮಂದಿ
ಪಾರ್ಕು ದಾಟುವ ಮುನ್ನವೆ
ಮರೆತವರು;
ನಾನು ಮರೆಯುವ ಹಾಗಿಲ್ಲ
ನನ್ನ ಮೂಗಿಗೇ ಕವಡೆ...
ಬೀಳಲಿ ಒಂದಾದರೂ
ಚಿತ್ತ!! ಭಾರ!! ಎಂಬಾಸೆ;
ಉಂಹೂಂ -
ಬರೀ ವಚ್ಚಿ,
ಪ್ರತೀ ಸಲಿಯೂ
ಬೆರಳಸಂದಿಯಲೆ ನುಸಿದು ಹೋಗುವ
ಗಿಚ್ಚಿ..
ಕನಸಿನ ಕೆನಿ.....................................ದ. ರಾ. ಬೇಂದ್ರೆ
-
ಬೇಂದ್ರೆಯವರು ಒಂದು ಸಲ ತಮ್ಮ ಭಾಷಣದಾಗ ಹೇಳಿದ್ದರು:
“ನನಗ ಏನೋ ಹೊಳೀಲಿಕ್ಕೆ ಹತ್ತೇದ; ಅದು ಏನಂತ ತಿಳೀವಲ್ತು. ನನಗ ಏನೋ ತಿಳೀಲಿಕ್ಕೆ ಹತ್ತೇದ; ಅದು
ಏನಂತ ಹೊಳೀವಲ್ತು.”
ಬೇಂದ್ರೆಯವರ ಕ...