ಮಬ್ಬುಗತ್ತಲ ಇಳಿಸಂಜೆ
ಪುಟ್ಟಕಣ್ಣಿನ ದೀಪ
ಸೊರಗಿದ್ದೂ ಸೊಗಯಿಸಿದ
ಬಿಳಿಬಿಳಿ ಅಂಗೈಯನ್ನು
ನಿನ್ನ ತಿಳಿಗೆಂಪು ಬೆರಳುಗಳ
ಮಿಂಚಲ್ಲಿ ತೋಯಿಸುತ್ತ
ಅಂದೆ ನೀನು
ತಾರಗೆಯೊಂದು ಬಿದ್ದಿಹುದು
ಅಂಗೈಯೊಳಗೆ
ಆ ಕ್ಷಣದ ರಮ್ಯತೆಗೆ
ಅದರೊಳಗಣ ಆರ್ದ್ರತೆಗೆ
ಅರಳಿದ ಭಾವ
ಧನ್ಯತೆಯೊಂದೇ
ಇಳಿಸಂಜೆಗಳ ಕಾಲವಳಿದು
ರಾತ್ರಿಕಳೆದು
ಮುಂಜಾವಗಳು ನಿದ್ದೆಯಲ್ಲಿಳಿದು
ಈಗ ಬಿರುಬೇಸಗೆಯ ಹಗಲು
ಬಾನೆದೆಯ ಕತ್ತಲಲ್ಲಿ ಮಿನುಗುವ ತಾರಗೆಯ
ನೋಡಿ
ಬೆಳಕಿನ ಲೋಕದ ಅಂಗೈಗೆ
ಬಿದ್ದವಳ ನೆನಕೆ,
ಮಿಂಚು ಹೊಳೆವುದೇ ಕತ್ತಲಲ್ಲಿ
ನೆರವೇರಿದ್ದ್ದಕ್ಕಿಂತಲೂ
ನಿರೀಕ್ಷೆಯಲ್ಲೇ ಸುಖ
ಎಲ್ಲ ನವ್ಯ ನವ್ಯೋತ್ತರಗಳಿಗೂ
ಅಡಿಗರ ಮೋಹನ ಮುರಳಿಯದೇ ಭಾಷ್ಯ!
ಸುಯ್ದು ನಿಟ್ಟುಸಿರು
ಸೋತ ಕತ್ತನ್ನ ಹಗೂರ ಎತ್ತುತ್ತ
ಕಣ್ದೆರೆದರೆ
ಮಳೆನಿಂತ ಕಪ್ಪುನೀಲಿ ಬಾನೊಡಲಲಿ
ಹೊಳೆ ಹೊಳೆವ ತಾರೆ
ರಸ್ತೆಯಂಚಲಿ
ಘಮಘಮಿಸಿ ಇಳಿಬಿದ್ದ
ಆಕಾಶ ಮಲ್ಲಿಗೆ!
ಜೋತಯ್ಯನ ಬಿದಿರು ಬುಟ್ಟಿ..................................ತೇಜಸ್ವಿನಿ ಹೆಗಡೆ
-
ಮಾನವೀಯ ಅನುಕಂಪವು ತೇಜಸ್ವಿನಿ ಹೆಗಡೆಯವರ ಸಾಹಿತ್ಯದ ಮೂಲಸ್ರೋತವಾಗಿದೆ. ತೇಜಸ್ವಿನಿಯವರ
ಕಥೆಗಳು ಸಂವೇದನಾಶೀಲ ಲೇಖನಿಯಿಂದ ಬಂದ ಕಥೆಗಳಾಗಿವೆ. ‘ಜೋತಯ್ಯನ ಬಿದಿರು ಬುಟ್ಟಿ’ಯೊಳಗಿರುವ
ಹತ್ತ...