ಸುಮ್ಮಗೆ ನೆಲದ ಮೇಲೆ
ಕಾಯುತ್ತ ಕೂತವಳ
ಎದಿರು
ಸಗ್ಗದಿಂದಿಳಿದಂತೆ
ನೀನು
ಹಾಜರಿ ಹಾಕಲು -
ಮೋಡವಾಗಿ ಬನಿಇಳಿವ
ಮೊದಲೇ
ಈ ಹನಿ
ಶರಧಿಯೊಳಗೆ ತಲ್ಲಣಿಸಿ
ಆವಿಯಾಗಿತ್ತೆಂಬ ಅರಿವು.
ಎಳೆಯ ಕಾಲದಿ ಬಿತ್ತಿದ
ಮೊಳಕೆಮೂಡದ ಬೀಜ
ಏರುಬದುಕಿನ ಬಿರುಹಾದಿಯಲಿ
ನೆರಳಿಗೆ ಹೊರಳಿದರೆ ತಂಗಾಳಿ
ಸೂಸುವ ಎಲೆಮರ,
ನೆನಪ ಗಂಧ ತೇಯುವ
ಕಲ್ಲು ಮನದ ಸುತ್ತ ಸುಳಿವ
ಸುಗಂಧಿತ ಸಮೀರ.
ನೀನು ಮೊನ್ನೆಯ ನಿಜ.
ಇವತ್ತೂ ನಿಜವೇ.
ಕಳೆದ ಕಾಲದ ಕನ್ನಡಿಯಲಿ
ನಿತ್ಯ ನೂತನ
ಮಂದಹಾಸವರಳಿಸುವ
ಮುಟ್ಟಲಾಗದ ನಿಜ.
ನಿಲುಕಲಾರದ ಅಳುಕಲ್ಲು
ಸವರಿ ಸಂತೈಸಿಕೊಳ್ಳುವೆ
ಕವಿತೆ ಬರೆವ ಲಹರಿ
ಅಲ್ಲು ಇಲ್ಲು ಎಲ್ಲೂ.
ಪೋಣಿಸಿದ ಅರಳು ಮೊಗ್ಗು
ಆಹ್ಲಾದ
ಕನಸು ಮನಸು
ನನಸಲ್ಲೂ!
ಮೃಗಶಿರ : ಹಲವು ಕಥೆಗಳ ಒಂದು ಸುಂದರ ಗುಚ್ಛ
-
*ಯಾ*ವುದೇ ಪುಸ್ತಕವನ್ನು ಅದರ ಮುಖಪುಟವನ್ನು ನೋಡಿ ಅಳೆಯದಿರು ಎಂದು ಹೇಳುತ್ತಾರೆ. ಅಂತೆಯೇ
ಓರ್ವ ವ್ಯಕ್ತಿಯ ಬದುಕನ್ನು ಅರಿಯುವಾಗ, ಕೇವಲ ಆತನ ಏಕಪಕ್ಷೀಯ ಮಾತುಗಳನ್ನು, ಅವರಿವರು
ಹೇಳಿದ್ದ...