ಹಿತವಾದ ಕತ್ತಲ ಇಳಿಸಂಜೆ
ಮಾತುಕತೆ ಮುಗಿಸಿ ಹಗುರಾಗಿ
ಬೀಸುಹೆಜ್ಜೆಯ ಲಘುನಡಿಗೆಯಲಿ
ಬೇಲಿ ದಾಟುವಾಗ ಮನೆಯಂಗಳದಿ-
ಪುಟ್ಟಗೆ ಉರಿವ
ತುಳಸಿಯ ದೀಪ
ಹಚ್ಚಿಡುವ ನೀನು,
ಸುಖಾಸುಮ್ಮನೆ ಕಡೆಗಣ್ಣಲಿ
ನೋಡಿದ್ಯಾಕೆ?
ದೀಪದ ಬೆಳಕನ್ನಷ್ಟೆ ತುಂಬಿಕೊಂಡು
ಮುನ್ನಡೆಯಲಿದ್ದ ನನ್ನ
ಜಗ್ಗಿ ನಿಲ್ಲಿಸಿ, ಮುಗ್ಗರಿಸಿ
ತಿರುತಿರುಗಿ ನೋಡುತ್ತ
ಹೊರಡಲಾರದೆ ಹೊರಟೆ..
ಈಗ ನೋಡು-
ಮಳೆ ನಿಂತ ತಂಪಲ್ಲು
ಹೊತ್ತಿ ಉರಿವ ಒಳಗು!
ನಿನಗೇನೂ..ಅಮ್ಮನ ಕರೆಗೆ
ಜೋಡು ಜಡೆಯ ಬೀಸುತ್ತ
ಕುಣಿವ ಹೆಜ್ಜೆಗಳಲ್ಲಿ ಓಡುತ್ತ
ಹೋಗುವ ಹೊತ್ತು;
ನಾನಿಲ್ಲಿ
ಹೆಜ್ಜೆ ಇಲ್ಲಿಡಲಾ ಬೇಡವಾ
ಯೋಚಿಸುತ್ತಾ
ಕಳೆಯದೇ ಜಾರುವ ಹೊತ್ತನ್ನ
ತುಂಬಲಾರದೆ ನೋಯುತ್ತಾ..
ಹೋಗೇ ಮರಿರಾಕ್ಷಸೀ,
ಇನ್ನೊಮ್ಮೆ ನಿನ್ನ ಯೋಚನೆ ಸುಳಿದರೆ ಕೇಳು
ನಿನ್ನ ದೀಪದುರಿಯ ಕುಡಿಗಣ್ಣು
ನನ್ನ ಕೆನ್ನೆಯ ಕತ್ತಲ ಮೇಲೆ ಪ್ರತಿಫಲಿಸುವವರೆಗೂ..
ಜನ ಹೇಳುತ್ತಾರೆ
ಪ್ರೀತಿ ಪ್ರೇಮ ಬರಿಯ ಮರುಳು..
ಹೌದಾ..?
ಅವರಿಗೇನು ಗೊತ್ತು
ನಿನ್ನ ಕಣ್ಣಿನ ಅಮಲು.
ಮೃಗಶಿರ : ಹಲವು ಕಥೆಗಳ ಒಂದು ಸುಂದರ ಗುಚ್ಛ
-
*ಯಾ*ವುದೇ ಪುಸ್ತಕವನ್ನು ಅದರ ಮುಖಪುಟವನ್ನು ನೋಡಿ ಅಳೆಯದಿರು ಎಂದು ಹೇಳುತ್ತಾರೆ. ಅಂತೆಯೇ
ಓರ್ವ ವ್ಯಕ್ತಿಯ ಬದುಕನ್ನು ಅರಿಯುವಾಗ, ಕೇವಲ ಆತನ ಏಕಪಕ್ಷೀಯ ಮಾತುಗಳನ್ನು, ಅವರಿವರು
ಹೇಳಿದ್ದ...